ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್ ಸೇರಿದಂತೆ ಮೂವರು ನಾಯಕರು ಮಾಧ್ಯಮದ ಮುಂದೆ ಹಾಜರಾಗಿ ಸಿನಿಮಾದ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ವಿಕ್ರಮ್ ನೋಡಲು ಅಭಿಮಾನಿಗಳ ದಂಡೇ ಸೇರಿತ್ತು.
ಚಿಯಾನ್ ವಿಕ್ರಮ್ ಮಾತನಾಡಿ, ಪುನೀತ್ ನೆನಪು ಮಾಡಿಕೊಂಡ ವಿಕ್ರಮ್, ಅಪ್ಪು ಕಳೆದುಕೊಂಡಿರೋದು ಸಿನಿಮಾ ಇಂಡಸ್ಟ್ರೀಗೆ ಬಹಳ ನಷ್ಟವಾಗಿದೆ. ಕೋಬ್ರಾ ಆಕ್ಷನ್ ಥ್ರಿಲ್ಲರ್, ಸೈನ್ಸ್ ಫಿಕ್ಷನ್ಸ್ ಸಿನಿಮಾವಾಗಿದ್ದು, ನಾನು 8 ರಿಂದ 9 ಗೆಟಪ್ ಸಿನಿಮಾದಲ್ಲಿದೆ ಕಾಣಿಸಿಕೊಂಡಿದ್ದೇನೆ. ನನ್ನ ಹಳೆ ಸಿನಿಮಾಗಳಿಗೆ ಹೋಲಿಕೆ ಮಾಡಿದ್ರೆ ಈ ಚಿತ್ರವೇ ಬೇರೆ.. ಕನ್ನಡದಲ್ಲಿ ಈ ಸಿನಿಮಾಗೆ ನಾನೇ ಡಬ್ಬ್ ಮಾಡಿದ್ದೇನೆ. ಆದ್ರೆ ಮಣಿರತ್ನಂ ಅವರ ಪೊನ್ನಿಯನ್ ಸೆಲ್ವಂ ಸಿನಿಮಾಗೆ ಕನ್ನಡದಲ್ಲಿ ಡಬ್ ಮಾಡಲು ಆಗಲಿಲ್ಲ. ಕೆಜಿಎಫ್ ಸೂಪರ್ ಹಿಟ್ ಆಗಿದೆ. ನಾನು ಯಶ್ ಒಳ್ಳೆ ಫ್ರೆಂಡ್ಸ್ ಎಂದ ವಿಕ್ರಮ್ ಕನ್ನಡದಲ್ಲಿ ಲೂಸಿಯಾ ಪವನ್ ಹೇಳಿದ ಕಥೆ ಇಷ್ಟವಾಗಿದ್ದು ಅವರ ಜೊತೆ ಸಿನಿಮಾ ಮಾಡುತ್ತೇನೆ ಎಂದು ತಿಳಿಸಿದರು.
ಶ್ರೀನಿಧಿ ಶೆಟ್ಟಿ, ನಾನು ಈ ಸಿನಿಮಾಗೆ ಕನ್ನಡದಲ್ಲಿ ಡಬ್ ಮಾಡಿದ್ದೇನೆ. ಅದು ಒಂದೇ ದಿನದಲ್ಲಿಯೇ. ಇದು ನಮ್ಮ ಮನೆ. ಇಲ್ಲಿಗೆ ಬಂದಾಗ ಖುಷಿಯಾಗುತ್ತದೆ. ಕನ್ನಡದ ಒಳ್ಳೆ ಕಥೆಗಳು ಬಂದ್ರೆ ಮುಂದಿನ ದಿನಗಳಲ್ಲಿ ಸಿನಿಮಾ ಮಾಡುತ್ತೇನೆ ಎಂದರು.
ಕೋಬ್ರಾ ಸಿನಿಮಾದಲ್ಲಿ ಚಿಯಾನ್ ವಿಕ್ರಮ್ ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದು, ಕೆಜಿಎಫ್ ಬಳಿಕ ಶ್ರೀನಿಧಿ ನಟಿಸಿರುವ ಮೊದಲ ಸಿನಿಮಾ ಇದಾಗಿದ್ದು ಸಹಜವಾಗಿ ನಿರೀಕ್ಷೆಗಳು ದುಪ್ಪಟ್ಟಿವೆ. ಖ್ಯಾತ ಕ್ರಿಕೆಟರ್ ಇಫ್ರಾನ್ ಪಠಾಣ್ ಕೂಡ ಮುಖ್ಯಭೂಮಿಯೆಲ್ಲಿ ಕಾಣಸಿಕೊಂಡಿದ್ದಾರೆ. ಅಜಯ್ ಜ್ಞಾನಮುತ್ತು ನಿರ್ದೇಶನದ ಈ ಚಿತ್ರವನ್ನು ಲಲಿತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಎಆರ್ ರೆಹಮಾನ್ ಸಂಗೀತ ಸಂಯೋಜನೆಯ ಈ ಚಿತ್ರ ಇದೇ ಆಗಸ್ಟ್ 31ಕ್ಕೆವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ. ಕರ್ನಾಟಕದಲ್ಲಿ ಹಾರಿಜೋನ್ ಸ್ಟುಡಿಯೊಸ್ ಬಿಡುಗಡೆ ಮಾಡಲಿದ್ದಾರೆ.
481204610_2617105938484688_8363298649307663091_n
480879653_2617105881818027_1225207657312831280_n
480665980_2617106145151334_1690462643566952054_n
480480131_2617106091818006_5800946902283222887_n
481342863_2617106095151339_2714617328521815189_n
480681350_2617106335151315_1572173884982828658_n
481002145_2617105855151363_9195706675307738833_n
480607763_2617106041818011_5387639070156250698_n
480597158_2617106078484674_8552492315759215528_n
480787686_2617106218484660_5838913762050628227_n
'ದಿಲ್ ದಾರ್' ಎಂದ ಕೆ.ಮಂಜು ಪುತ್ರ....ಶ್ರೇಯಸ್ ಹೊಸ ಸಿನಿಮಾಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್... ಕೆ.ಮಂಜು ಪುತ್ರ ಶ್ರೇಯಸ್ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್...'ದಿಲ್ ದಾರ್' ಸಿನಿಮಾಗೆ ಕ್ರೇಜಿಸ್ಟಾರ್ ಸಾಥ್ ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು ಹೊಸ ಸಿನಿಮಾಕ್ಕೆ ದಿಲ್ ದಾರ್ ಎಂಬ ಕ್ಯಾಚಿ ಟೈಟಲ್ ಫಿಕ್ಸ್ ಮಾಡಲಾಗಿದೆ. ಈ ಚಿತ್ರದ ಮುಹೂರ್ತ ಸಮಾರಂಭ ಇವತ್ತು ಬೆಂಗಳೂರಿನ ಶ್ರೀಕಂಠೇಶ್ವರ ದೇಗುಲದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾಗೆ ಕ್ಲ್ಯಾಪ್ ಮಾಡಿ ಟೈಟಲ್ ಅನಾವರಣ ಮಾಡಿದರು. ನಾಗತಿಹಳ್ಳಿ ಚಂದ್ರಶೇಖರ್ ಕ್ಯಾಮೆರಾಗೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು. ಟೈಟಲ್ ರಿವೀಲ್ ಮಾಡಿ ಮಾತಾನಾಡಿದ ಕ್ರೇಜಿಸ್ಟಾರ್ ರವಿಚಂದ್ರನ್, ಸಿನಿಮಾ ಮಾಡಬೇಕು ಅಂದರೆ ದಿಲ್ ಬೇಕು. ನಟ ಶ್ರೇಯಸ್ ಮಂಜು ಹಾಗೂ ಇಡೀ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು. ದಿಲ್ ದಾರ್ ನಿರ್ದೇಶಕ ಮಧು ಗೌಡ ಮಾತನಾಡಿ, ಈ ಸಿನಿಮಾ ಕೇವಲ ನನ್ನಿಂದ ಅಲ್ಲ. ನನ್ನ ತಂಡದ ಸಪೋರ್ಟ್ ನಿಂದ ಸಾಧ್ಯವಾಗಿದೆ. ಕತೆ ರೆಡಿ ಮಾಡಿದಾಗ ದಿಲ್ ದಾರ್ ಟೈಟಲ್ ಫಿಕ್ಸ್ ಮಾಡಿದಾಗ. ಯಾರು ಇದ್ದಾರೆ ದಿಲ್ ದಾರ್ ಅಂತ ಥಿಂಕ್ ಮಾಡಿದಾಗ ಸಿಕ್ಕಿದ್ದ ಶ್ರೇಯಸ್ ಮಂಜು ನೆನಪಾದರು ಎಂದರು. ಚಿತ್ರದ ನಿರ್ಮಾಪಕ ಸಂತೋಷ್ ಮಾತನಾಡಿ, ನಿರ್ದೇಶಕ ಮಧು ಅವರು ನನ್ನ ಬಳಿ ಕತೆ ಹೇಳಿದಾಗ ತುಂಬಾ ಇಷ್ಟ ಆಯ್ತು. ಅದಕ್ಕೆ ಒಪ್ಪಿಕೊಂಡೆ ಎಂದರು. ಪ್ರಿಯಾಂಕ , ನಾನು ಈ ಹಿಂದೆ ಅದ್ಧೂರಿ ಲವರ್ಸ್ ಹಾಗೂ ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ಅಭಿನಯಿಸಿದ್ದೇ. ಈಗ ಈ ಸಿನಿಮಾದಲ್ಲಿ ನಟಿಸುತ್ತೇನೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಇರಬೇಕು ಎಂದರು. ನಟ ಶ್ರೇಯಸ್ ಮಂಜು ಮಾತನಾಡಿ, ರವಿಚಂದ್ರನ್ ಸರ್ ನನಗೆ ತುಂಬಾ ಕಾನ್ಫಿಡೆನ್ಸ್ ಕೊಟ್ಟಿದ್ದಾರೆ. ನನ್ನ ಚಿತ್ರಕ್ಕೆ ಶುಭಕೋರಲು ಬಂದ ಎಲ್ಲಾ ನಿರ್ದೇಶಕರಿಗೂ ಧನ್ಯವಾದ ತಿಳಿಸುತ್ತೇನೆ. ಪ್ರತಿಯೊಬ್ಬ ಡೈರೆಕ್ಟರ್ ಹತ್ತಿರ ಒಂದೊಂದು ಟಿಪ್ಸ್ ತಗೊಂತಿನಿ ಎಂದರು. ನಂತರ ರಾಕಿಂಗ್ ಸ್ಟಾರ್ ಯಶ್ ಅವರು ನನಗೆ ತುಂಬಾ ಸಪೋರ್ಟ್ ಕೊಟ್ಟಿದ್ದಾರೆ. ಈ ಅವಕಾಶವನ್ನು ನನಗೆ ಕೊಟ್ಟಿದ್ದಕ್ಕೆ ನಿರ್ದೇಶಕ ಮಧ ಅವರಿಗೆ ಧನ್ಯವಾದ. ದಿಲ್ ದಾರ್ ಚಿತ್ರ ಕಾಲೇಜ್ ಸ್ಟೋರಿ ಆಗಿದೆ. ನಾಳೆಯಿಂದ ಶೂಟಿಂಗ್ ರಿಹರ್ಸಲ್ ಮಾಡುತ್ತಿದ್ದೇವೆ ಎಂದರು. ಏಷ್ಯಾನೆಟ್ ಮೂವೀ ಬ್ಯಾನರ್ ನಟಿ ಆರ್ ಸಂತೋಷ್ ಕುಮಾರ್(ಎಸ್ ವಿಟಿ) ಚಿತ್ರ ನಿರ್ಮಾಣ ಮಾಡ್ತಿದ್ದು, ಅರ್ಜುನ್ ಜನ್ಯ ಸಂಗೀತ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ, ರಾಜೇಶ್ ಸಾಲುಂಡಿ ಸಂಭಾಷಣೆ ಚಿತ್ರಕ್ಕಿದೆ. ದುರ್ಗ, ನೀಲಿ ಸೀರಿಯಲ್ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ಮಧು ಗೌಡ ಗಂಗೂರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.
338189495_237094805370096_1568030468575385888_nಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ’ ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದ್ದು, ಈ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಾಲ್ಕನೇ ಆವೃತ್ತಿಯನ್ನು ಇಂದು ಬೆಂಗಳೂರಿನ ಪಿ.ಆರ್.ಕೆ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಪುಸ್ತಕದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಡಾ.ಶರಣು ಹುಲ್ಲೂರು, ಪ್ರಕಾಶಕ ಜಮೀಲ್ ಸಾವಣ್ಣ ಮತ್ತು ಪಿ.ಆರ್.ಕೆಯ ಸತೀಶ್ ಅವರು ಕೂಡ ಹಾಜರಿದ್ದರು.
320035685_1138639563296453_1199750161020844789_nKANNADA TIMES YouTube channel has surpassed the 10,000 number! I am speechless.
A big thank you to all my YouTube subscribers we have now reached 10, 000 subscribers. I am amazed to witness this weekend that the amount of subscribers on my KANNADA TIMES YouTube channel has surpassed the 10,000 number! I am speechless. I would like to thank you all for subscribing and viewing. Your comments are overwhelming and it is much appreciated! Thank you for your continuous support. Thank you, thank you, thank you… I love you all! Sending you lots of love and light! Regards, DR.CHINMAYA RAO FOUNDER, CHIEF EDITOR & PUBLISHER KANNADA TIMES (R.) https://www.youtube.com/kannadatimesಕೋಬ್ರಾ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿಳಿದ ವಿಕ್ರಮ್
301566088_758514208739811_7772129883481108601_nಕೋಬ್ರಾ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿಳಿದ ವಿಕ್ರಮ್
301532496_479966016956344_7490059839969585370_n