‘ದಿಲ್ ದಾರ್’ ಎಂದ ಕೆ.ಮಂಜು ಪುತ್ರ….ಶ್ರೇಯಸ್ ಹೊಸ ಸಿನಿಮಾಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್…

ಕೆ.ಮಂಜು ಪುತ್ರ ಶ್ರೇಯಸ್ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್...'ದಿಲ್ ದಾರ್' ಸಿನಿಮಾಗೆ ಕ್ರೇಜಿಸ್ಟಾರ್ ಸಾಥ್

ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು ಹೊಸ ಸಿನಿಮಾಕ್ಕೆ ದಿಲ್ ದಾರ್ ಎಂಬ ಕ್ಯಾಚಿ ಟೈಟಲ್ ಫಿಕ್ಸ್ ಮಾಡಲಾಗಿದೆ. ಈ ಚಿತ್ರದ ಮುಹೂರ್ತ ಸಮಾರಂಭ ಇವತ್ತು ಬೆಂಗಳೂರಿನ ಶ್ರೀಕಂಠೇಶ್ವರ ದೇಗುಲದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾಗೆ ಕ್ಲ್ಯಾಪ್ ಮಾಡಿ ಟೈಟಲ್ ಅನಾವರಣ ಮಾಡಿದರು. ನಾಗತಿಹಳ್ಳಿ ಚಂದ್ರಶೇಖರ್ ಕ್ಯಾಮೆರಾಗೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು.

ಟೈಟಲ್ ರಿವೀಲ್ ಮಾಡಿ ಮಾತಾನಾಡಿದ ಕ್ರೇಜಿಸ್ಟಾರ್ ರವಿಚಂದ್ರನ್, ಸಿನಿಮಾ ಮಾಡಬೇಕು ಅಂದರೆ ದಿಲ್ ಬೇಕು. ನಟ ಶ್ರೇಯಸ್ ಮಂಜು ಹಾಗೂ ಇಡೀ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು.

ದಿಲ್ ದಾರ್ ನಿರ್ದೇಶಕ ಮಧು ಗೌಡ ಮಾತನಾಡಿ, ಈ ಸಿನಿಮಾ ಕೇವಲ ನನ್ನಿಂದ ಅಲ್ಲ. ನನ್ನ ತಂಡದ ಸಪೋರ್ಟ್ ನಿಂದ ಸಾಧ್ಯವಾಗಿದೆ. ಕತೆ ರೆಡಿ ಮಾಡಿದಾಗ ದಿಲ್ ದಾರ್ ಟೈಟಲ್ ಫಿಕ್ಸ್ ಮಾಡಿದಾಗ. ಯಾರು ಇದ್ದಾರೆ ದಿಲ್ ದಾರ್ ಅಂತ ಥಿಂಕ್ ಮಾಡಿದಾಗ ಸಿಕ್ಕಿದ್ದ ಶ್ರೇಯಸ್ ಮಂಜು ನೆನಪಾದರು ಎಂದರು.

ಚಿತ್ರದ ನಿರ್ಮಾಪಕ ಸಂತೋಷ್ ಮಾತನಾಡಿ, ನಿರ್ದೇಶಕ ಮಧು ಅವರು ನನ್ನ ಬಳಿ ಕತೆ ಹೇಳಿದಾಗ ತುಂಬಾ ಇಷ್ಟ ಆಯ್ತು. ಅದಕ್ಕೆ ಒಪ್ಪಿಕೊಂಡೆ ಎಂದರು.

ಪ್ರಿಯಾಂಕ , ನಾನು ಈ ಹಿಂದೆ ಅದ್ಧೂರಿ ಲವರ್ಸ್ ಹಾಗೂ ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ಅಭಿನಯಿಸಿದ್ದೇ. ಈಗ ಈ ಸಿನಿಮಾದಲ್ಲಿ ನಟಿಸುತ್ತೇನೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಇರಬೇಕು ಎಂದರು.

ನಟ ಶ್ರೇಯಸ್ ಮಂಜು ಮಾತನಾಡಿ, ರವಿಚಂದ್ರನ್ ಸರ್ ನನಗೆ ತುಂಬಾ ಕಾನ್ಫಿಡೆನ್ಸ್ ಕೊಟ್ಟಿದ್ದಾರೆ. ನನ್ನ ಚಿತ್ರಕ್ಕೆ ಶುಭಕೋರಲು ಬಂದ ಎಲ್ಲಾ ನಿರ್ದೇಶಕರಿಗೂ ಧನ್ಯವಾದ ತಿಳಿಸುತ್ತೇನೆ. ಪ್ರತಿಯೊಬ್ಬ ಡೈರೆಕ್ಟರ್ ಹತ್ತಿರ ಒಂದೊಂದು ಟಿಪ್ಸ್ ತಗೊಂತಿನಿ ಎಂದರು. ನಂತರ ರಾಕಿಂಗ್ ಸ್ಟಾರ್ ಯಶ್ ಅವರು ನನಗೆ ತುಂಬಾ ಸಪೋರ್ಟ್ ಕೊಟ್ಟಿದ್ದಾರೆ. ಈ ಅವಕಾಶವನ್ನು ನನಗೆ ಕೊಟ್ಟಿದ್ದಕ್ಕೆ ನಿರ್ದೇಶಕ ಮಧ ಅವರಿಗೆ ಧನ್ಯವಾದ. ದಿಲ್ ದಾರ್ ಚಿತ್ರ ಕಾಲೇಜ್ ಸ್ಟೋರಿ ಆಗಿದೆ. ನಾಳೆಯಿಂದ ಶೂಟಿಂಗ್ ರಿಹರ್ಸಲ್ ಮಾಡುತ್ತಿದ್ದೇವೆ ಎಂದರು.

ಏಷ್ಯಾನೆಟ್ ಮೂವೀ ಬ್ಯಾನರ್ ನಟಿ ಆರ್ ಸಂತೋಷ್ ಕುಮಾರ್(ಎಸ್ ವಿಟಿ) ಚಿತ್ರ ನಿರ್ಮಾಣ ಮಾಡ್ತಿದ್ದು, ಅರ್ಜುನ್ ಜನ್ಯ ಸಂಗೀತ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ, ರಾಜೇಶ್ ಸಾಲುಂಡಿ ಸಂಭಾಷಣೆ ಚಿತ್ರಕ್ಕಿದೆ. ದುರ್ಗ, ನೀಲಿ ಸೀರಿಯಲ್ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ಮಧು ಗೌಡ ಗಂಗೂರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.

Exit mobile version