ಅರಿವೇ ಗುರುಜೀವನ ಕಲೆ

ಬಸವಣ್ಣನವರ ಕೆಲವು ಜನಪ್ರಿಯ ವಚನಗಳು

1. ಉಳ್ಳವರು ಶಿವಾಲಯ ಕಟ್ಟುವರು

ನಾನೇನು ಮಾಡಲಿ ಬಡವನಯ್ಯ!!

ಎನ್ನ ಕಾಲೇ ಕಂಬ, ದೇಹವೇ ದೇಗುಲ

ಶಿರವೇ ಹೊನ್ನ ಕಳಶವಯ್ಯ!!

ಕೂಡಲಸಂಗಮದೇವ ಕೇಳಯ್ಯ

ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ

2. ದಯವಿಲ್ಲದ ಧರ್ಮವಾವುದಯ್ಯಾ ?

ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ

ದಯವೇ ಧರ್ಮದ ಮೂಲವಯ್ಯೂ

ಕೂಡಲ ಸಂಗಯ್ಯನಂತಲ್ಲದೊಲ್ಲನಯ್ಯೂ !!

3. ಆನು ಒಬ್ಬನು; ಸುಡುವರೈವರು.

ಮೇಲೆ ಕಿಚ್ಚು ಘನ, ನಿಲಲು ಬಾರದು.

ಕಾಡುಬಸವನ ಹುಲಿ ಕೊಂಡೊಯ್ದರೆ

ಆರೈಯಲಾಗದೆ ಕೂಡಲಸಂಗಮದೇವ ?

4. ಮನವೇ ಸರ್ಪ, ತನುವೇ ಹೇಳಿಗೆ!

ಹಾವಿನೊಡತಣ ಹುದುವಾಳಿಗೆ!

ಇನ್ನಾವಾಗ ಕೊಂದಹುದೆಂದರಿಯೆ.

ಇನ್ನಾವಾಗ ತಿಂದಹುದೆಂದರಿಯೆ.

ನಿಚ್ಚಕ್ಕೆ ನಿಮ್ಮ ಪೂಜಿಸಬಲ್ಲಡೆ

ಅದೇ ಗಾರುಡ ಕೂಡಲಸಂಗಮದೇವ.

5. ಕಳ್ಳ ನಾಗರ ಕಂಡರೆ ಹಾಲನೆರೆ ಎಂಬುದು

ದಿಟದ ನಾಗರ ಕೊಲ್ಲೆಂಬರಯ್ಯ

ಉಂಬ ಜಂಗಮ ಬಂದರೆ ನಡೆಯೆಂಬುದು

ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರು

ನಮ್ಮ ಕೂಡಲಸಂಗನ ಶರಣರ ಕಂಡು

ಉದಾಸೀನವ ಮಾಡಿದರೆ

ಕಲ್ಲತಾಗಿದ ಮಿಟ್ಟಿಯಂತಪ್ಪರಯ್ಯ

6. ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ!

ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ!

ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ!

ಇದಾವ ಪರಿಯಲ್ಲಿ ಕಾಡಿತ್ತು ಮಾಯೆ

ಈ ಮಾಯೆಯ ಕಳೆವೊಡೆ ಯೆನ್ನಳವಲ್ಲ,

ನೀವೇ ಬಲ್ಲಿರಿ ಕೂಡಲಸಂಗಮದೇವಾ.

7. ಇವನಾರವ ಇವನಾರವ ಇವನಾರವ ನೆಂದಿನಸದಿರಯ್ಯಾ

ಇವ ನಮ್ಮವ ಇವ ನಮ್ಮವ ಇವ ನಮ್ಮವ ನೆಂದಿನಸಯ್ಯಾ

ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ.

8. ಅಯ್ಯಾ, ನಿಮ್ಮ ಶರಣನ ಮರ್ತ್ಯಕ್ಕೆ ತಂದೆಯಾಗಿ ನೆನೆನೆನೆದು

ಸುಖಿಯಾಗಿಯಾನು ಬದುಕಿದೆನಯ್ಯಾ. ಅದೇನು ಕಾರಣ

ತಂದೆಯಿಂದರಿದೆನಯ್ಯಾ. ಅರಿದರಿದು ನಿಮ್ಮ ಶರಣನು

ಆಚರಿಸುವಾಚರಣೆಯ ಕಂಡು ಕಣ್ದೆರೆದೆನಯ್ಯಾ ಕೂಡಲಸಂಗಮದೇವಾ.

9. ಸಕ್ಕರೆಯ ಕೊಡನ ತುಂಬಿ

ಹೊರಗ ಸವಿದರೆ ರುಚಿಯುಂಟೆ ?

ತಕ್ಕೈಸಿ ಭುಜತುಂಬಿ,

ಲಿಂಗಸ್ಪರ್ಶನವ ಮಾಡದೆ,

ಅಕ್ಕಟಾ, ಸಂಸಾರ ವೃಥಾ ಹೋಯಿತ್ತಲ್ಲ!

ಅದೇತರ ಭಕ್ತಿ ? ಅದೇತರ ಯುಕ್ತಿ ? ಕೂಡಿಕೊ!

ಕೂಡಲಸಂಗಮದೇವ

10. ಸ್ವಾಮಿ ನೀನು, ಶಾಶ್ವತ ನೀನು.

ಎತ್ತಿದೆ ಬಿರುದ ಜಗವೆಲ್ಲರಿಯಲು.

ಮಹಾದೇವ, ಮಹಾದೇವ!

ಇಲ್ಲಿಂದ ಮೇಲೆ ಶಬ್ದವಿಲ್ಲ!

ಪಶುಪತಿ ಜಗಕ್ಕೆ ಏಕೋದೇವ;

ಸ್ವರ್ಗಮರ್ತ್ಯ ಪಾತಾಳದೊಳಗೊಬ್ಬನೇ ದೇವ;

ಕೂಡಲಸಂಗಮದೇವ

Related Articles

Back to top button

Looks like your ad blocker is on.

We rely on ads to bring you our intuitive articles & journalism. Please allow ads & support KannadaTimes.com.